23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!