22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya
error: Content is protected !!