April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.14 ರಂದು ಮೀನ ಸಂಕ್ರಮಣದಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಿತು.

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ ; ಕಿಶು ಪೆರಿಂಜೆ

Related posts

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!