September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ; ಮಂಗಳೂರು ಇಂಡಿಯಾನ ಆಸ್ಪತ್ರೆಯ ಮುಖ್ಯಸ್ಥ, ಅಂತಾರಾಷ್ಟ್ರೀಯ ಖ್ಯಾತಿಯ ಹೃದಯ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಗಳಿಗೆ ರಂಝಾನ್ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.


ಹಿರಿಯ ಸಮಾಜ ಸೇವಕ, ಇಂಡಿಯಾನ ಆಸ್ಪತ್ರೆಯ ಒಡನಾಡಿ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಮಾ.14 ರಂದು ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಜಮೀಯತುಲ್ ಫಲಾಹ್ ಜಿಲ್ಲಾ ಮಾಜಿ ಅಧ್ಯಕ್ಷ ಹಾಜಿ ಅಬ್ದುಲ್‌ ಲತೀಫ್ ಸಾಹೆಬ್ ವಹಿಸಿದ್ದು, ಡಾ. ಯೂಸುಫ್ ಕುಂಬ್ಲೆ ಅವರ ಆರೋಗ್ಯ ಸೇವೆಯ ಪರಿಯನ್ನು ವಿವರಿಸಿದರು.
ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಪುಂಜಾಲಕಟ್ಟೆ ದುಆ ನೆರವೇರಿಸಿದರು. ಇಬ್ರಾಹಿಂ ಮುಸ್ಲಿಯಾರ್, ಅಬ್ಬೋನು ಮದ್ದಡ್ಕ, ಅಬ್ಬಾಸ್ ಸುನ್ನತ್‌ಕೆರೆ ಉಪಸ್ಥಿತರಿದ್ದರು. ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಳಿಕ ಆಯ್ದ ಫಲಾನುಭವಿಗಳಿಗೆ ಕಿಟ್ ಹಾಗೂ ಇನ್ನೂ ಅರ್ಹರಿಗೆ ಆರ್ಥಿಕ ಮೊತ್ತ ನೀಡಲಾಯಿತು.

Related posts

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!