23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ, ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್, ಕಿರಿಯ ಆರೋಗ್ಯ ಸಹಾಯಕಿ ನಿಖಿತಾ ಮತ್ತು ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ವೀಣಾ, ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

ಜಯಶ್ರೀ ನಿರೂಪಿಸಿ ಹಾಗೂ ಸ್ವಾಗತವನ್ನು ಜನನಿ ಸಂಜೀವಿನಿ ಒಕ್ಕೂಟದ MBK ವಿಮಲರವರು ಮಾಡಿದರು.ಪ್ರಾರ್ಥನೆಯನ್ನು ಜಯಶ್ರೀ ಜನನಿ ಸಂಜೀವಿನಿ ಕಾರ್ಯದರ್ಶಿ ಮಾಡಿದರು.ಸದಸ್ಯರಿಗೆ ಆಟೋಟ ಸ್ಪರ್ದೆಯನ್ನು ನಡೆಸಲಾಯಿತು.

ನಾರಿಶಕ್ತಿ ಸನ್ಮಾನವನ್ನು ಸಂಘದ 3 ಸದಸ್ಯರಿಗೆ ಮಾಡಲಾಯಿತು.ದಿವ್ಯಜೋತಿ ಸ್ತ್ರಿ ಶಕ್ತಿಯ ಭವಾನಿ ಇವರಿಗೆ ಕೋಳಿ ಸಾಕಣಿಗೆ ಶ್ರೀ ದುರ್ಗಾ ಸಂಜೀವಿನಿ ಸದಸ್ಯೆಯಾದ ಕವಿತಾ ಇವರಿಗೆ ಆಡು ಸಾಕಣಿಕೆ ಹಾಗೂ ಸುಜ್ಞಾನ ವಿಶೇಷ ಚೇತನರ ಸ್ವ ಸಹಾಯ ಸಂಘದ ಸದಸ್ಯ ಸೌರಭ ಇವರಿಗೆ ಸನ್ಮಾನಿಸಲಾಯಿತು.

ಸುಶೀಲ ಮಾ.ತಾ.ಸ, ಗೀತಾ ಶಾರದ ಮಾ.ಗ್ರಾ.ಪಂ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರುಗಳು ಒಕ್ಕೂಟದ ಪದಾಧಿಕಾರಿಗಳು, LCRP ಗಳು, ಕೃಷಿ ಸಖಿ, ಪಶುಸಖಿ, ಮಹಿಳಾ ಸಂಘದ ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲ ಎನ್ ಇವರು ಭಾಗವಹಿಸಿದರು. ಗೀತಾ ಧನ್ಯವಾದವಿತ್ತರು .

Related posts

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya
error: Content is protected !!