23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

ಕಳೆಂಜ: ಜನನಿ ಗ್ರಾಮ ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಇದರ ಸಮ್ಮಿಲನದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಎ.ಕೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ರೈ, ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್, ಕಿರಿಯ ಆರೋಗ್ಯ ಸಹಾಯಕಿ ನಿಖಿತಾ ಮತ್ತು ಸಂಜೀವಿನಿ ಒಕ್ಕೂಟದ ವಲಯ ಮೇಲ್ವಿಚಾರಕಿ ವೀಣಾ, ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.

ಜಯಶ್ರೀ ನಿರೂಪಿಸಿ ಹಾಗೂ ಸ್ವಾಗತವನ್ನು ಜನನಿ ಸಂಜೀವಿನಿ ಒಕ್ಕೂಟದ MBK ವಿಮಲರವರು ಮಾಡಿದರು.ಪ್ರಾರ್ಥನೆಯನ್ನು ಜಯಶ್ರೀ ಜನನಿ ಸಂಜೀವಿನಿ ಕಾರ್ಯದರ್ಶಿ ಮಾಡಿದರು.ಸದಸ್ಯರಿಗೆ ಆಟೋಟ ಸ್ಪರ್ದೆಯನ್ನು ನಡೆಸಲಾಯಿತು.

ನಾರಿಶಕ್ತಿ ಸನ್ಮಾನವನ್ನು ಸಂಘದ 3 ಸದಸ್ಯರಿಗೆ ಮಾಡಲಾಯಿತು.ದಿವ್ಯಜೋತಿ ಸ್ತ್ರಿ ಶಕ್ತಿಯ ಭವಾನಿ ಇವರಿಗೆ ಕೋಳಿ ಸಾಕಣಿಗೆ ಶ್ರೀ ದುರ್ಗಾ ಸಂಜೀವಿನಿ ಸದಸ್ಯೆಯಾದ ಕವಿತಾ ಇವರಿಗೆ ಆಡು ಸಾಕಣಿಕೆ ಹಾಗೂ ಸುಜ್ಞಾನ ವಿಶೇಷ ಚೇತನರ ಸ್ವ ಸಹಾಯ ಸಂಘದ ಸದಸ್ಯ ಸೌರಭ ಇವರಿಗೆ ಸನ್ಮಾನಿಸಲಾಯಿತು.

ಸುಶೀಲ ಮಾ.ತಾ.ಸ, ಗೀತಾ ಶಾರದ ಮಾ.ಗ್ರಾ.ಪಂ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರುಗಳು ಒಕ್ಕೂಟದ ಪದಾಧಿಕಾರಿಗಳು, LCRP ಗಳು, ಕೃಷಿ ಸಖಿ, ಪಶುಸಖಿ, ಮಹಿಳಾ ಸಂಘದ ಸದಸ್ಯರುಗಳು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಮಲ ಎನ್ ಇವರು ಭಾಗವಹಿಸಿದರು. ಗೀತಾ ಧನ್ಯವಾದವಿತ್ತರು .

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya
error: Content is protected !!