ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

ನ್ಯಾಯತರ್ಪು : ಇಲ್ಲಿಯ ಜಾರಿಗೆಬೈಲು ಸಮೀಪದ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುವ ಮೂಲಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು, ನಜ್ಜು-ಗುಜ್ಜಾದ ಘಟನೆ ಮಾ.15 ರಂದು ಸಂಜೆ ನಡೆಯಿತು.

ಕೆಎ.20 ಎಮ್.ಎ.2965 ಉಡುಪಿ ಮೂಲದ ಹೋಲ್ ಸೇಲ್ ಮತ್ತು ರಿಟೈಲರ್ ವ್ಯಾಪಾರದ ವ್ಯಕ್ತಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಓರ್ವ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು ಸ್ಥಳೀಯರು 108 ಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ನಿಲ್ಲಿಸಿದಂತೆ ಕಾಣುವ ದೃಶ್ಯವನ್ನು ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ. ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು,ವಾಹನಗಳ ಸಂಚಾರಕ್ಕೆ ಸಹಕರಿಸಿದರು.

Related posts

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya
error: Content is protected !!