25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

ನ್ಯಾಯತರ್ಪು : ಇಲ್ಲಿಯ ಜಾರಿಗೆಬೈಲು ಸಮೀಪದ ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅತಿ ವೇಗವಾಗಿ ಚಲಿಸುವ ಮೂಲಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಬಿದ್ದು, ನಜ್ಜು-ಗುಜ್ಜಾದ ಘಟನೆ ಮಾ.15 ರಂದು ಸಂಜೆ ನಡೆಯಿತು.

ಕೆಎ.20 ಎಮ್.ಎ.2965 ಉಡುಪಿ ಮೂಲದ ಹೋಲ್ ಸೇಲ್ ಮತ್ತು ರಿಟೈಲರ್ ವ್ಯಾಪಾರದ ವ್ಯಕ್ತಿ ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಓರ್ವ ಮಾತ್ರ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು ಸ್ಥಳೀಯರು 108 ಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಚರಂಡಿಗೆ ಬಿದ್ದು 3 ಬಾರಿ ಪಲ್ಟಿ ಹೊಡೆದ ಕಾರು ರಸ್ತೆಯಿಂದ ಅಂದಾಜು 10 ಅಡಿ ಎತ್ತರಕ್ಕೆ ಜಿಗಿದು ಪಕ್ಕದ ಮನೆಯ ಅಂಗಳದಲ್ಲಿ ನಿಲ್ಲಿಸಿದಂತೆ ಕಾಣುವ ದೃಶ್ಯವನ್ನು ನೋಡಿದ ಮನೆಯವರು ಹೆದರಿ ದಂಗಾಗಿದ್ದಾರೆ. ಸ್ಥಳೀಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದು,ವಾಹನಗಳ ಸಂಚಾರಕ್ಕೆ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya
error: Content is protected !!