July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya
error: Content is protected !!