25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!