25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ.

ಮುಂಡಾಜೆ ಕೊಡಂಗೆ ಮನೆ, ರಾಘವ ಗೌಡರವರ ಪತ್ನಿ ರಾಧಾರವರು ಮನೆಯಲ್ಲಿಯೇ ಇದ್ದು ಬೀಡಿ ಕಟ್ಟುವ ಕೆಲಸ ಮಾಡಿಕೊಂಡಿದ್ದವರು ಮಕ್ಕಳಾಗದ ವಿಚಾರದಲ್ಲಿ ಆಕೆ ಬಹಳ ನಿರಾಶೆ ಮತ್ತು ಬೇಸರದಿಂದ ಇದ್ದವರು ಕೆಲವು ಸಮಯದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಮಾನಸಿಕವಾಗಿ ತೀರಾ ನೊಂದುಕೊಂಡಿದ್ದರು. ಮಾ.12 ರಂದು ಮಧ್ಯಾಹ್ನ ರಾಘವ ವಿಶ್ರಾಂತಿಗೆಂದು ಮಲಗಿದ್ದು ಸಂಜೆ ಸುಮಾರು 4 ಗಂಟೆಯ ಸಮಯಕ್ಕೆ ರಾಧಾರವರು ಹೊರಗಿನಿಂದ ರಾಘವರವನ್ನು ಕರೆದು ತಾನು ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿದ್ದಾಗಿ ತಿಳಿಸಿದ್ದು ಕೂಡಲೇ ಆಕೆಯನ್ನು ಆಟೋರಿಕ್ಷಾದಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಮೇರೆಗೆ ರಾಧಾರವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು.ಡಿ.ಆರ್ 21/2024 ಕಲಂ: 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya
error: Content is protected !!