ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಘಟನೆ ಮಾ.14 ರಂದು ನಡೆದಿದೆ.

ಉಜಿರೆ ನಿವಾಸಿ ರಾಮಣ್ಣ ನಾಯ್ಕ (57) ಎಂಬವರ ದೂರಿನಂತೆ, ಮಾ.14ರಂದು ಸಂಜೆ, ಉಜಿರೆ ಗ್ರಾಮದ ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ, ರಾಮಣ್ಣ ರವರು ತನ್ನ ಬಾಬ್ತು ದ್ಗಿಚಕ್ರ ವಾಹನ ನಂಬ್ರ ಕೆಎ70 ಹೆಚ್‌7484 ನೇದನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ, ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಕೆಎ70ಜೆ2415ನೇದನ್ನು ಅದರ ಸವಾರ ಆರೋಪಿ ದೀರಜ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಾಮಣ್ಣ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ವಾಹನಗಳ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಅವರುಗಳನ್ನು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ಮಂಪರ್ ಪರೀಕ್ಷೆ-ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!