23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

ಬಳಂಜ: ಶಿವಗಿರಿ ಕಾಪಿನಡ್ಕ ವತಿಯಿಂದ ಬಳಂಜ ವಾಲಿಬಾಲ್ ಕ್ಲಬ್ ನ ಸಹಯೋಗದೊಂದಿಗೆ ವಾಲಿಬಾಲ್ ಪಂದ್ಯಾಟ ಹಾಗೂ ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ನೇರವೇರಿಸಿ ಶುಭಕೋರಿದರು.ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ ಅಧ್ಯಕ್ಷತೆಯನ್ನು ವಹಿಸಿದ್ದರು.

ಕ್ರೀಡಾಂಗಣದ ಉದ್ಘಾಟನೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ನೇರವೇರಿಸಿ ಶುಭಕೋರಿದರು.ವೇದಿಕೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹೆಚ್.ಧರ್ಣಪ್ಪ ಪೂಜಾರಿ,ಉಜಿರೆ ಪಂಚಾಯತ್ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ,ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಪ್ರಗತಿಪರ ಕೃಷಿಕ ಅನಿಲ್ ಕುಮಾರ್ ಮಾಳಿಗೆ ಮನೆ,ಉದ್ಯಮಿ ಸಂತೋಷ್ ಹೆಗ್ಡೆ ಮಾರುತಿ ನಿಲಯ,ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ,ಪತ್ರಕರ್ತ ಮನೋಹರ್ ಬಳಂಜ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ, ಉಪಸ್ಥಿತರಿದ್ದರು.ವಿಜಯ್ ಕುಮಾರ್ ಜೈನ್ ಸ್ವಾಗತಿಸಿದರು.ಲೇಡಿ ಜೇಸಿ ಸಂಯೋಜಕಿ ಶೃತಿ ರಂಜಿತ್ ಸನ್ಮಾನಿತರ ಪರಿಚಯ ಮಾಡಿಕೊಟ್ಟರು.

Related posts

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!