23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

ಬೆಳ್ತಂಗಡಿ : ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ, ನಿವೃತ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ನರೇಂದ್ರ ಕುಮಾರ್ ಮಂಗಳೂರು, ಉದ್ಯಮಿ ನಾಣ್ಯಪ್ಪ ಪೂಜಾರಿ, ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ|
ಚಂದ್ರಕಾಂತ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ, ಕಾನೂನು ಸಲಹೆಗಾರರಾದ ನ್ಯಾಯವಾದಿ ಶಶಿಕಿರಣ್ ಜೈನ್, ಪಶು ಸಂಗೋಪನಾ ಇಲಾಖೆಯ ಮುಖ್ಯ ಆಡಳಿತ ಪಶು ವೈದ್ಯಾಧಿಕಾರಿ ಡಾ|ರವಿ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಕೀರ್ತಿ ಜೈನ್ ರವರು ನಮ್ಮ ಸಹಕಾರಿ ಸಂಘವು ಪ್ರಾರಂಭವಾಗಿ 15 ವರ್ಷಗಳಾಗಿದ್ದು ಇದೀಗ ಸಹಕಾರಿ ಸಂಘವನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಹಾಗೂ ಎಲ್ಲರ ಸಹಕಾರದಿಂದ ಇಂದು ಉತ್ತಮ ಸಹಕಾರಿ ಸಂಘವಾಗಿ ಬೆಳೆದು ಬಂದಿದೆ ಎಂದು ತಿಳಿಸಿದರು. ನಿತ್ಯ ನಿಧಿ ಠೇವಣಿ ಸಂಗ್ರಾಹಕರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಡೆಯಿತು.

ಸಭೆಯಲ್ಲಿ ನಿರ್ದೇಶಕರಾದ ಜಯರಾಜ್ ಜೈನ್, ಅಬ್ದುಲ್ ರಝಾಕ್, ಶ್ರೀಮತಿ ಆರತಿ, ಶ್ರೀಮತಿ ವಾರಿಜ ಕೆ., ಪ್ರಶಾಂತ್ ಕುಮಾರ್, ಪರಮೇಶ್ ಟಿ., ಶ್ರೀಮತಿ ರತ್ನಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ಪ್ರಬಂಧಕ ಅತಿಶಯ್ ಜೈನ್, ಶ್ರೀಮತಿ ವಿಶಾಲ, ಕಾನೂನು ಸಲಹೆಗಾರರಾದ ನ್ಯಾಯವಾದಿ ಶಿವಯ್ಯ, ಸಾಲ ವಸೂಲಾತಿಗಾರರಾದ ನಿರ್ಮಲ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಉಸ್ತುವಾರಿಯನ್ನು ಸಲಹೆಗಾರರಾದ ವಸಂತ ಸುವರ್ಣ ವಹಿಸಿದ್ದರು. ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಸ್ವಾಗತಿಸಿ, ನಿರ್ದೇಶಕರಾದ ಶ್ರೀಮತಿ ಹೇಮಲತಾ ವಂದಿಸಿದರು. ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರಾಜೇಶ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!