ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ ಈ ಸಮಾಜದ ಮಹಿಳೆ ಎನ್ನುವುದು ನಾವೆಲ್ಲ ಅರಿತುಕೊಳ್ಳಬೇಕಾಗಿದೆ. ಆ ದಿನವನ್ನು ಅರಿತುಕೊಂಡು ಇಡೀ ವಿಶ್ವದಲ್ಲಿ ಈ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ನಮ್ಮ ಮಹಿಳಾ ಸಮಾಜಕ್ಕೆ ಮಹಾನ್ ಶಕ್ತಿ ಬಂದಂತೆ ಆಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ರವರು ಮಾತನಾಡಿದರು.


ಅವರು ಬೆಳ್ತಂಗಡಿಯ ಶಾಂತಿಶ್ರೀ ವತಿಯಿಂದ ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಸಭಾಭವನದಲ್ಲಿ ಉದ್ದೇಶಿಸಿ ಮಾತನಾಡಿದರು. ಮಹಿಳಾ ದಿನಾಚರಣೆಯ ಉದ್ದೇಶ ಹಾಗೂ ಮಹಿಳೆಯರ ಸ್ಥಾನಮಾನದ ಬಗ್ಗೆ ತಿಳಿ ಹೇಳಿದರು.
ಆಧುನಿಕ ಸಮಾಜಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ರತ್ನಮ್ಮನವರ ಹಾಗೂ ಶ್ರೀಮತಿ ಡಾ. ಹೇಮಾವತಿ ವೀರೇಂದ್ರ ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಂಡರು.
ಅವರು ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿದ್ದುಕೊಂಡು ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ.


ಸಂಘದ ಸರ್ವ ಸದಸ್ಯರಿಗೆ ಮನೋರಂಜನ ಆಟಗಳನ್ನು ಏರ್ಪಡಿಸಿ, ಕಾರ್ಯಕ್ರಮವನ್ನು ಭಗವಂತನ ಚಿಂತನೆಯೊಂದಿಗೆ ಆರಂಭಿಸಿ, ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬ ಆಚರಿಸುವ ಸದಸ್ಯರನ್ನು ಅಭಿನಂದಿಸುವುದರೊಂದಿಗೆ , ಸ್ಪರ್ಧಾ ವಿಜೇತರಿಗೆ ಸಂಘದ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್.ಹೆಗ್ಡೆ ಬಹುಮಾನ ವಿತರಿಸಿದರು.

ಶ್ರೀಮತಿ ದವಳ ಕಾರ್ಯಕ್ರಮ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

Related posts

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya
error: Content is protected !!