ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಘಟನೆ ಮಾ.14 ರಂದು ನಡೆದಿದೆ.

ಉಜಿರೆ ನಿವಾಸಿ ರಾಮಣ್ಣ ನಾಯ್ಕ (57) ಎಂಬವರ ದೂರಿನಂತೆ, ಮಾ.14ರಂದು ಸಂಜೆ, ಉಜಿರೆ ಗ್ರಾಮದ ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ, ರಾಮಣ್ಣ ರವರು ತನ್ನ ಬಾಬ್ತು ದ್ಗಿಚಕ್ರ ವಾಹನ ನಂಬ್ರ ಕೆಎ70 ಹೆಚ್‌7484 ನೇದನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ, ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಕೆಎ70ಜೆ2415ನೇದನ್ನು ಅದರ ಸವಾರ ಆರೋಪಿ ದೀರಜ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಾಮಣ್ಣ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ವಾಹನಗಳ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಅವರುಗಳನ್ನು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!