July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ : ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಘಟನೆ ಮಾ.14 ರಂದು ನಡೆದಿದೆ.

ಉಜಿರೆ ನಿವಾಸಿ ರಾಮಣ್ಣ ನಾಯ್ಕ (57) ಎಂಬವರ ದೂರಿನಂತೆ, ಮಾ.14ರಂದು ಸಂಜೆ, ಉಜಿರೆ ಗ್ರಾಮದ ಉಜಿರೆ ಎಸ್‌ಡಿಎಂ ಕಾಲೇಜಿನ ಬಳಿ, ರಾಮಣ್ಣ ರವರು ತನ್ನ ಬಾಬ್ತು ದ್ಗಿಚಕ್ರ ವಾಹನ ನಂಬ್ರ ಕೆಎ70 ಹೆಚ್‌7484 ನೇದನ್ನು ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ, ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ಕೆಎ70ಜೆ2415ನೇದನ್ನು ಅದರ ಸವಾರ ಆರೋಪಿ ದೀರಜ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಾಮಣ್ಣ ರವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ವಾಹನಗಳ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ. ಅವರುಗಳನ್ನು ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya
error: Content is protected !!