July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಇವರ ಜಂಟಿ ಆಶ್ರಯಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ ಮಾ.16ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ವಹಿಸಿ, ಮಾತನಾಡಿ ಪಯಾ೯ಯ ಇಂಧನಕ್ಕಾಗಿ ಸೂರ್ಯ ನ ಬೆಳಕನ್ನು ಬಳಸುವ ಬಗ್ಗೆ ಸಂಶೋಧನೆ ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಇದರ ಬಳಕೆಯಾಗಬೇಕು ಎಂದು ಕೆರೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸೆಲ್ಕೋ ಫೌಂಡೇಶನ್ ಸಂಸ್ಥಾಪಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಹರೀಶ್ ಹಂದೆ, ಸ್ವಾಮಿ ವಿವೇಕಾನಂದ ಯೂತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸವಿತಾ ಸುಳುಗೋಡು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎಲ್.ಹೆಚ್. ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಭಾಗವಹಿಸಿದ್ದರು.

ಸುಮಂಗಳಾ , ಕವಿತಾ ಪ್ರಾರ್ಥಿಸಿದರು. ಬೆಂಗಳೂರು ಸೆಲ್ಕೋ ಸೋಲಾರ್ ಲೈಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋಹನ್ ಭಾಸ್ಕರ ಹೆಗಡೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಯೋಜನೆಯ ಯೋಜನಾಧಿಕಾರಿ ಶ್ರೀನಿವಾಸ ಪೂಜಾರಿ ಅತ್ತಾಜೆ, ಸೆಲ್ಕೋ ಸಂಸ್ಥೆಯ ಡಿ ಜಿ ಎಂ ಗುರು ಪ್ರಕಾಶ್, ಪ್ರಸನ್ನ ಹೆಗ್ಡೆ ನಿರೂಪಿಸಿದರು.

ವಿವಿಧ ಮಹಿಳಾ ಉದ್ಯಮಿಗಳು, ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸೆಲ್ಕೋ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

Related posts

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya
error: Content is protected !!