ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ ಈ ಸಮಾಜದ ಮಹಿಳೆ ಎನ್ನುವುದು ನಾವೆಲ್ಲ ಅರಿತುಕೊಳ್ಳಬೇಕಾಗಿದೆ. ಆ ದಿನವನ್ನು ಅರಿತುಕೊಂಡು ಇಡೀ ವಿಶ್ವದಲ್ಲಿ ಈ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ನಮ್ಮ ಮಹಿಳಾ ಸಮಾಜಕ್ಕೆ ಮಹಾನ್ ಶಕ್ತಿ ಬಂದಂತೆ ಆಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ರವರು ಮಾತನಾಡಿದರು.


ಅವರು ಬೆಳ್ತಂಗಡಿಯ ಶಾಂತಿಶ್ರೀ ವತಿಯಿಂದ ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಸಭಾಭವನದಲ್ಲಿ ಉದ್ದೇಶಿಸಿ ಮಾತನಾಡಿದರು. ಮಹಿಳಾ ದಿನಾಚರಣೆಯ ಉದ್ದೇಶ ಹಾಗೂ ಮಹಿಳೆಯರ ಸ್ಥಾನಮಾನದ ಬಗ್ಗೆ ತಿಳಿ ಹೇಳಿದರು.
ಆಧುನಿಕ ಸಮಾಜಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ರತ್ನಮ್ಮನವರ ಹಾಗೂ ಶ್ರೀಮತಿ ಡಾ. ಹೇಮಾವತಿ ವೀರೇಂದ್ರ ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಂಡರು.
ಅವರು ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿದ್ದುಕೊಂಡು ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ.


ಸಂಘದ ಸರ್ವ ಸದಸ್ಯರಿಗೆ ಮನೋರಂಜನ ಆಟಗಳನ್ನು ಏರ್ಪಡಿಸಿ, ಕಾರ್ಯಕ್ರಮವನ್ನು ಭಗವಂತನ ಚಿಂತನೆಯೊಂದಿಗೆ ಆರಂಭಿಸಿ, ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬ ಆಚರಿಸುವ ಸದಸ್ಯರನ್ನು ಅಭಿನಂದಿಸುವುದರೊಂದಿಗೆ , ಸ್ಪರ್ಧಾ ವಿಜೇತರಿಗೆ ಸಂಘದ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್.ಹೆಗ್ಡೆ ಬಹುಮಾನ ವಿತರಿಸಿದರು.

ಶ್ರೀಮತಿ ದವಳ ಕಾರ್ಯಕ್ರಮ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

Related posts

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya
error: Content is protected !!