September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

ಬೆಳ್ತಂಗಡಿ : ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೆ. ಜಯಕೀರ್ತಿ ಜೈನ್ ರವರು ಸರಕಾರಿ ಸೇವೆಯಿಂದ ನಿವೃತ್ತಿಯಾಗಿದ್ದು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ, ನಿವೃತ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿ.ಆರ್. ನರೇಂದ್ರ ಕುಮಾರ್ ಮಂಗಳೂರು, ಉದ್ಯಮಿ ನಾಣ್ಯಪ್ಪ ಪೂಜಾರಿ, ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ|
ಚಂದ್ರಕಾಂತ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ, ಕಾನೂನು ಸಲಹೆಗಾರರಾದ ನ್ಯಾಯವಾದಿ ಶಶಿಕಿರಣ್ ಜೈನ್, ಪಶು ಸಂಗೋಪನಾ ಇಲಾಖೆಯ ಮುಖ್ಯ ಆಡಳಿತ ಪಶು ವೈದ್ಯಾಧಿಕಾರಿ ಡಾ|ರವಿ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಕೀರ್ತಿ ಜೈನ್ ರವರು ನಮ್ಮ ಸಹಕಾರಿ ಸಂಘವು ಪ್ರಾರಂಭವಾಗಿ 15 ವರ್ಷಗಳಾಗಿದ್ದು ಇದೀಗ ಸಹಕಾರಿ ಸಂಘವನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ಯುವುದಾಗಿ ಹಾಗೂ ಎಲ್ಲರ ಸಹಕಾರದಿಂದ ಇಂದು ಉತ್ತಮ ಸಹಕಾರಿ ಸಂಘವಾಗಿ ಬೆಳೆದು ಬಂದಿದೆ ಎಂದು ತಿಳಿಸಿದರು. ನಿತ್ಯ ನಿಧಿ ಠೇವಣಿ ಸಂಗ್ರಾಹಕರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಡೆಯಿತು.

ಸಭೆಯಲ್ಲಿ ನಿರ್ದೇಶಕರಾದ ಜಯರಾಜ್ ಜೈನ್, ಅಬ್ದುಲ್ ರಝಾಕ್, ಶ್ರೀಮತಿ ಆರತಿ, ಶ್ರೀಮತಿ ವಾರಿಜ ಕೆ., ಪ್ರಶಾಂತ್ ಕುಮಾರ್, ಪರಮೇಶ್ ಟಿ., ಶ್ರೀಮತಿ ರತ್ನಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶಾಖಾ ಪ್ರಬಂಧಕ ಅತಿಶಯ್ ಜೈನ್, ಶ್ರೀಮತಿ ವಿಶಾಲ, ಕಾನೂನು ಸಲಹೆಗಾರರಾದ ನ್ಯಾಯವಾದಿ ಶಿವಯ್ಯ, ಸಾಲ ವಸೂಲಾತಿಗಾರರಾದ ನಿರ್ಮಲ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಉಸ್ತುವಾರಿಯನ್ನು ಸಲಹೆಗಾರರಾದ ವಸಂತ ಸುವರ್ಣ ವಹಿಸಿದ್ದರು. ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಸ್ವಾಗತಿಸಿ, ನಿರ್ದೇಶಕರಾದ ಶ್ರೀಮತಿ ಹೇಮಲತಾ ವಂದಿಸಿದರು. ಶಿಕ್ಷಣ ಇಲಾಖೆಯ ಸಿ.ಆರ್.ಪಿ. ರಾಜೇಶ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya
error: Content is protected !!