25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ ಈ ಸಮಾಜದ ಮಹಿಳೆ ಎನ್ನುವುದು ನಾವೆಲ್ಲ ಅರಿತುಕೊಳ್ಳಬೇಕಾಗಿದೆ. ಆ ದಿನವನ್ನು ಅರಿತುಕೊಂಡು ಇಡೀ ವಿಶ್ವದಲ್ಲಿ ಈ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ನಮ್ಮ ಮಹಿಳಾ ಸಮಾಜಕ್ಕೆ ಮಹಾನ್ ಶಕ್ತಿ ಬಂದಂತೆ ಆಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ರವರು ಮಾತನಾಡಿದರು.


ಅವರು ಬೆಳ್ತಂಗಡಿಯ ಶಾಂತಿಶ್ರೀ ವತಿಯಿಂದ ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಸಭಾಭವನದಲ್ಲಿ ಉದ್ದೇಶಿಸಿ ಮಾತನಾಡಿದರು. ಮಹಿಳಾ ದಿನಾಚರಣೆಯ ಉದ್ದೇಶ ಹಾಗೂ ಮಹಿಳೆಯರ ಸ್ಥಾನಮಾನದ ಬಗ್ಗೆ ತಿಳಿ ಹೇಳಿದರು.
ಆಧುನಿಕ ಸಮಾಜಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ರತ್ನಮ್ಮನವರ ಹಾಗೂ ಶ್ರೀಮತಿ ಡಾ. ಹೇಮಾವತಿ ವೀರೇಂದ್ರ ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಂಡರು.
ಅವರು ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿದ್ದುಕೊಂಡು ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ.


ಸಂಘದ ಸರ್ವ ಸದಸ್ಯರಿಗೆ ಮನೋರಂಜನ ಆಟಗಳನ್ನು ಏರ್ಪಡಿಸಿ, ಕಾರ್ಯಕ್ರಮವನ್ನು ಭಗವಂತನ ಚಿಂತನೆಯೊಂದಿಗೆ ಆರಂಭಿಸಿ, ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬ ಆಚರಿಸುವ ಸದಸ್ಯರನ್ನು ಅಭಿನಂದಿಸುವುದರೊಂದಿಗೆ , ಸ್ಪರ್ಧಾ ವಿಜೇತರಿಗೆ ಸಂಘದ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಎಸ್.ಹೆಗ್ಡೆ ಬಹುಮಾನ ವಿತರಿಸಿದರು.

ಶ್ರೀಮತಿ ದವಳ ಕಾರ್ಯಕ್ರಮ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!