September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅವರು ಈ ಸಾಲಿನ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಂದು ಮಾರ್ಚ್ 17ರ ಭಾನುವಾರ ಸಂಜೆ 4.30 ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೊಳಂಬೆ ಪ್ರದೇಶಕ್ಕೆ ನೆರೆ ಅಪ್ಪಳಿಸಿ ಆ ಭಾಗದ ಜನರ ಆಸ್ತಿ ಪಾಸ್ತಿಗಳು ನಷ್ಟಗೊಂಡಾಗ ಅವರ ನೆರವಿಗೆ ನಿಂತವರು ಮೋಹನ್ ಕುಮಾರ್ ರವರು. ಆ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನು ಕಟ್ಟಿಕೊಂಡು ಸಂತ್ರಸ್ತರಿಗೆ ನೆರವು ಒದಗಿಸಿ ಬದುಕು ಕಟ್ಟಿ ಕೊಟ್ಟವರು ಮೋಹನ್ ಕುಮಾರ್ ರವರು.ಕಳೆದ ಹಲವಾರು ಸಮಯಗಳಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

Related posts

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya
error: Content is protected !!