22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

ಬೆಳ್ತಂಗಡಿ:ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅವರು ಈ ಸಾಲಿನ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಂದು ಮಾರ್ಚ್ 17ರ ಭಾನುವಾರ ಸಂಜೆ 4.30 ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೊಳಂಬೆ ಪ್ರದೇಶಕ್ಕೆ ನೆರೆ ಅಪ್ಪಳಿಸಿ ಆ ಭಾಗದ ಜನರ ಆಸ್ತಿ ಪಾಸ್ತಿಗಳು ನಷ್ಟಗೊಂಡಾಗ ಅವರ ನೆರವಿಗೆ ನಿಂತವರು ಮೋಹನ್ ಕುಮಾರ್ ರವರು. ಆ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನು ಕಟ್ಟಿಕೊಂಡು ಸಂತ್ರಸ್ತರಿಗೆ ನೆರವು ಒದಗಿಸಿ ಬದುಕು ಕಟ್ಟಿ ಕೊಟ್ಟವರು ಮೋಹನ್ ಕುಮಾರ್ ರವರು.ಕಳೆದ ಹಲವಾರು ಸಮಯಗಳಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

Related posts

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya
error: Content is protected !!