24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

ಮಡಂತ್ಯಾರು:ಶ್ರೀ ರಾಮ ದೇವಸ್ಥಾನ ಪಡುಕೋಣೆ ನಾಡ ಬೈಂದೂರು ತಾಲೂಕಿನಲ್ಲಿಸೀತಾರಾಮ ಕಲ್ಯಾಣೊತ್ಸವದ ಪ್ರಯುಕ್ತ ನಡೆದ ಅಹ್ವಾನಿತ ತಂಡಗಳ ಅಂತರ್ ಜಿಲ್ಲಾ ಮಟ್ಟದ (30 ನಿಮಿಷಗಳ) ಕುಣಿತ ಭಜನಾ ಸ್ಪರ್ಧೆ ಯಲ್ಲಿ ಹಾಗೂ ಶ್ರೀ ಹುಲಿಗಿರ್ತಿ ಮತ್ತು ಸಹ ಪರಿವಾರ ದೇವಸ್ಥಾನ ಸರ್ಪನ ಕಟ್ಟೆ ಭಟ್ಕಳ ತಾಲೂಕು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಕುಣಿತಾ ಭಜನೆ ಸ್ಪರ್ಧೆಯಲ್ಲಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ,ಮಡಂತ್ಯಾರು ತಂಡವು ಎರಡು ಕಡೆಯು ಪ್ರಥಮ ಸ್ಥಾನ ವನ್ನ ಪಡೆದುಕೊಂಡಿತು.

30 ವರ್ಷಗಳಿಂದ ನಿರಂತರವಾಗಿ ಪಾರೆಂಕಿ ದೇವಸ್ಥಾನದಲ್ಲಿ ಭಜನಾ ಸೇವೆಗೈಯುತ್ತ ಕಳೆದ 2 ವರ್ಷಗಳಿಂದ ಕುಣಿತಾ ಭಜನೆ ಸ್ಪರ್ಧೆಯಲ್ಲಿ ತಂಡವು ಭಾಗವಹಿಸುತಿದ್ದು ಹಲವಾರು ಜಿಲ್ಲಾ, ರಾಜ್ಯ ಮಟ್ಟದ ಕುಣಿತ ಭಜನೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದೆ, ಜೊತೆಗೆ ನಿರಂತರವಾಗಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಜನೆ ಕಾರ್ಯಕ್ರಮವನ್ನ ನೀಡುತ್ತಿದೆ.

ಪ್ರಶಸ್ತಿ ಪಡೆದ ತಂಡದಲ್ಲಿ ಚಂದ್ರಹಾಸ ಬಳಂಜ, ಧೀರಾಜ್ ಮಡಂತ್ಯಾರು, ಗಿರೀಶ್, ಶೈಲೇಶ್, ಮೋಹನಂದ, ನೀಶಾಂತ್, ದೀಕ್ಷಿತ್,ಸುಕೇಶ್ ರಕ್ಷಾ, ಚೈತ್ರ, ಯಶ್ವೀತಾ, ಮನೀಷಾ ಭಾಗವಹಿಸಿದ್ದು ತಂಡದೊಂದಿಗೆ ಮಂಡಳಿಯ ಗೌರವಾಧ್ಯಕ್ಷರಾದ ಯೋಗೀಶ್ ಹೆಗ್ಡೆ, ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ ಸದಸ್ಯರಾದ ಗುರುರಾಜ್, ಅಭಿಲಾಷ್ ಹಾಗೂ ಕೀರ್ತನ್ ಜೊತೆಗಿದ್ದು ಸಹಕರಿಸಿದರು.ತಂಡಕ್ಕೆ ಪ್ರಖ್ಯಾತ ತರಬೇತುದಾರರಾದ ವಿಜಯ್ ನಿರ್ಕೇರೆಯವರು ತರಬೇತಿ ನೀಡಿದ್ದಾರೆ.

Related posts

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!