April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

ಮಡಂತ್ಯಾರು:ಶ್ರೀ ರಾಮ ದೇವಸ್ಥಾನ ಪಡುಕೋಣೆ ನಾಡ ಬೈಂದೂರು ತಾಲೂಕಿನಲ್ಲಿಸೀತಾರಾಮ ಕಲ್ಯಾಣೊತ್ಸವದ ಪ್ರಯುಕ್ತ ನಡೆದ ಅಹ್ವಾನಿತ ತಂಡಗಳ ಅಂತರ್ ಜಿಲ್ಲಾ ಮಟ್ಟದ (30 ನಿಮಿಷಗಳ) ಕುಣಿತ ಭಜನಾ ಸ್ಪರ್ಧೆ ಯಲ್ಲಿ ಹಾಗೂ ಶ್ರೀ ಹುಲಿಗಿರ್ತಿ ಮತ್ತು ಸಹ ಪರಿವಾರ ದೇವಸ್ಥಾನ ಸರ್ಪನ ಕಟ್ಟೆ ಭಟ್ಕಳ ತಾಲೂಕು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಕುಣಿತಾ ಭಜನೆ ಸ್ಪರ್ಧೆಯಲ್ಲಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ,ಮಡಂತ್ಯಾರು ತಂಡವು ಎರಡು ಕಡೆಯು ಪ್ರಥಮ ಸ್ಥಾನ ವನ್ನ ಪಡೆದುಕೊಂಡಿತು.

30 ವರ್ಷಗಳಿಂದ ನಿರಂತರವಾಗಿ ಪಾರೆಂಕಿ ದೇವಸ್ಥಾನದಲ್ಲಿ ಭಜನಾ ಸೇವೆಗೈಯುತ್ತ ಕಳೆದ 2 ವರ್ಷಗಳಿಂದ ಕುಣಿತಾ ಭಜನೆ ಸ್ಪರ್ಧೆಯಲ್ಲಿ ತಂಡವು ಭಾಗವಹಿಸುತಿದ್ದು ಹಲವಾರು ಜಿಲ್ಲಾ, ರಾಜ್ಯ ಮಟ್ಟದ ಕುಣಿತ ಭಜನೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದೆ, ಜೊತೆಗೆ ನಿರಂತರವಾಗಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಜನೆ ಕಾರ್ಯಕ್ರಮವನ್ನ ನೀಡುತ್ತಿದೆ.

ಪ್ರಶಸ್ತಿ ಪಡೆದ ತಂಡದಲ್ಲಿ ಚಂದ್ರಹಾಸ ಬಳಂಜ, ಧೀರಾಜ್ ಮಡಂತ್ಯಾರು, ಗಿರೀಶ್, ಶೈಲೇಶ್, ಮೋಹನಂದ, ನೀಶಾಂತ್, ದೀಕ್ಷಿತ್,ಸುಕೇಶ್ ರಕ್ಷಾ, ಚೈತ್ರ, ಯಶ್ವೀತಾ, ಮನೀಷಾ ಭಾಗವಹಿಸಿದ್ದು ತಂಡದೊಂದಿಗೆ ಮಂಡಳಿಯ ಗೌರವಾಧ್ಯಕ್ಷರಾದ ಯೋಗೀಶ್ ಹೆಗ್ಡೆ, ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ ಸದಸ್ಯರಾದ ಗುರುರಾಜ್, ಅಭಿಲಾಷ್ ಹಾಗೂ ಕೀರ್ತನ್ ಜೊತೆಗಿದ್ದು ಸಹಕರಿಸಿದರು.ತಂಡಕ್ಕೆ ಪ್ರಖ್ಯಾತ ತರಬೇತುದಾರರಾದ ವಿಜಯ್ ನಿರ್ಕೇರೆಯವರು ತರಬೇತಿ ನೀಡಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya
error: Content is protected !!