22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

ಮಡಂತ್ಯಾರು:ಶ್ರೀ ರಾಮ ದೇವಸ್ಥಾನ ಪಡುಕೋಣೆ ನಾಡ ಬೈಂದೂರು ತಾಲೂಕಿನಲ್ಲಿಸೀತಾರಾಮ ಕಲ್ಯಾಣೊತ್ಸವದ ಪ್ರಯುಕ್ತ ನಡೆದ ಅಹ್ವಾನಿತ ತಂಡಗಳ ಅಂತರ್ ಜಿಲ್ಲಾ ಮಟ್ಟದ (30 ನಿಮಿಷಗಳ) ಕುಣಿತ ಭಜನಾ ಸ್ಪರ್ಧೆ ಯಲ್ಲಿ ಹಾಗೂ ಶ್ರೀ ಹುಲಿಗಿರ್ತಿ ಮತ್ತು ಸಹ ಪರಿವಾರ ದೇವಸ್ಥಾನ ಸರ್ಪನ ಕಟ್ಟೆ ಭಟ್ಕಳ ತಾಲೂಕು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಕುಣಿತಾ ಭಜನೆ ಸ್ಪರ್ಧೆಯಲ್ಲಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ,ಮಡಂತ್ಯಾರು ತಂಡವು ಎರಡು ಕಡೆಯು ಪ್ರಥಮ ಸ್ಥಾನ ವನ್ನ ಪಡೆದುಕೊಂಡಿತು.

30 ವರ್ಷಗಳಿಂದ ನಿರಂತರವಾಗಿ ಪಾರೆಂಕಿ ದೇವಸ್ಥಾನದಲ್ಲಿ ಭಜನಾ ಸೇವೆಗೈಯುತ್ತ ಕಳೆದ 2 ವರ್ಷಗಳಿಂದ ಕುಣಿತಾ ಭಜನೆ ಸ್ಪರ್ಧೆಯಲ್ಲಿ ತಂಡವು ಭಾಗವಹಿಸುತಿದ್ದು ಹಲವಾರು ಜಿಲ್ಲಾ, ರಾಜ್ಯ ಮಟ್ಟದ ಕುಣಿತ ಭಜನೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನ ಪಡೆದಿದೆ, ಜೊತೆಗೆ ನಿರಂತರವಾಗಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಜನೆ ಕಾರ್ಯಕ್ರಮವನ್ನ ನೀಡುತ್ತಿದೆ.

ಪ್ರಶಸ್ತಿ ಪಡೆದ ತಂಡದಲ್ಲಿ ಚಂದ್ರಹಾಸ ಬಳಂಜ, ಧೀರಾಜ್ ಮಡಂತ್ಯಾರು, ಗಿರೀಶ್, ಶೈಲೇಶ್, ಮೋಹನಂದ, ನೀಶಾಂತ್, ದೀಕ್ಷಿತ್,ಸುಕೇಶ್ ರಕ್ಷಾ, ಚೈತ್ರ, ಯಶ್ವೀತಾ, ಮನೀಷಾ ಭಾಗವಹಿಸಿದ್ದು ತಂಡದೊಂದಿಗೆ ಮಂಡಳಿಯ ಗೌರವಾಧ್ಯಕ್ಷರಾದ ಯೋಗೀಶ್ ಹೆಗ್ಡೆ, ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ ಸದಸ್ಯರಾದ ಗುರುರಾಜ್, ಅಭಿಲಾಷ್ ಹಾಗೂ ಕೀರ್ತನ್ ಜೊತೆಗಿದ್ದು ಸಹಕರಿಸಿದರು.ತಂಡಕ್ಕೆ ಪ್ರಖ್ಯಾತ ತರಬೇತುದಾರರಾದ ವಿಜಯ್ ನಿರ್ಕೇರೆಯವರು ತರಬೇತಿ ನೀಡಿದ್ದಾರೆ.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!