23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

ಉಜಿರೆ:ಉಜಿರೆಯ ಸುಂದರ ನಗರಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪ್ರಾರಂಭಿಸಿದ ಶೀತಲ್ ಗಾರ್ಡನ್ ನಲ್ಲಿ ವಿಜಯ ಸಭಾಭವನದ ಉದ್ಘಾಟನೆಯು ಮಾ.17ರಂದು ನಡೆಯಿತು.

ನೂತನ ಸಭಾಭವನದ ಉದ್ಘಾಟನೆಯನ್ನು ಉಜಿರೆ ಭಾರತ್ ಆಯರ್ನ್ ವರ್ಕ್ಸ್ ನ ಮಾಲಕರಾದ ಬಿ.ಪಾಂಡುರಂಗ ಬಾಳಿಗ ನೆರವೇರಿಸಿ ಸುಂದರವಾದ ಸಭಾಭವನ ಉಜಿರೆಯಲ್ಲಿ ನಿರ್ಮಿಸಿದ್ದು ಸಂತೋಷ ತಂದಿದೆ.ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ವಹಿಸಿ ಮಾತನಾಡಿ ಉದ್ಯಮದೊಂದಿಗೆ ನೂರಾರು ಜನರಿಗೆ ಆಶ್ರಯದಾತರಾದ ಗೋಪಾಲ ಸಿ ಬಂಗೇರ ಸಮಾಜಕ್ಕೆ ಮಾದರಿ ಎಂದರು.ವೇದಿಕೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್,ಸದಸ್ಯರಾದ ಕೆ.ಬಾಲಕೃಷ್ಣ ಗೌಡ,ಚಾರ್ಟರ್ಡ್ ಅಕೌಂಟೆಂಟ್ ಕೆ.ಸುರೇಂದ್ರ ನಾಯಕ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಪ್ರಭಂಧಕರಾದ ಪದ್ಮನಾಭ ನಾಯಕ್,ಬೆಳ್ತಂಗಡಿಯ ಪ್ರಸಿದ್ಧ ವ್ಯದ್ಯರಾದ ಡಾ.ಜಗನ್ನಾಥ್,ನಿವೃತ್ತ ಶಿಕ್ಷಕರಾದ ಸಂಜೀವ ಪೂಜಾರಿ ಕೊಕ್ಕರ್ಣೆ,ನಿವೃತ್ತ ಪುಡ್ ಇನ್ಸ್ಪೆಕ್ಟರ್ ಎಂ.ಎಸ್ ಬಂಗೇರ ಉಪಸ್ಥಿತರಿದ್ದರು.

ಆಯಾಂಶ್ ಪ್ರಾರ್ಥನೆ ಹಾಡಿದರು. ಶೀತಲ್ ಗಾರ್ಡನ್ ಮಾಲೀಕರಾದ ಗೋಪಾಲ್ ಸಿ ಬಂಗೇರ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸುನೀಲ್ ಕಾಶಿಬೆಟ್ಟು ನಿರೂಪಿಸಿದರು.ಶ್ರೀಮತಿ ವಿಜಯ ಗೋಪಾಲ ಬಂಗೇರ ನಂದಗೋಗುಲ ಪಂದುಬೆಟ್ಟು ವಂದಿಸಿದರು.ಶ್ರೀಮತಿ ಶೀತಲ್ ಮತ್ತು ಸಾಹಿಲ್ ವೈ ಕುಮಾರ್ ಜಯಶ್ರೀ ಬೆಳ್ತಂಗಡಿ, ಡಾ. ಸುಶ್ಮಿತಾ ಮತ್ತು ಅಶ್ವತ್ ರಾಜ್ ಅನುಗ್ರಹ ಆದಿ ಉಡುಪಿ,ಯುವ ಉದ್ಯಮಿ ಪ್ರಶಾಂತ್ ಕೊಕ್ಕರ್ಣೆ,ಸಂಜೀವ ಪೂಜಾರಿ ವೇಣೂರು ಹಾಗೂ ಗೋಪಾಲ ಬಂಗೇರರವರ ಬಂಧುಗಳು, ಶೀತಲ್ ಗಾರ್ಡನ್ ನ ಮ್ಯಾನೇಜರ್,ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!