July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

ಉಜಿರೆ: ಕೊಡಗು ವಿಶ್ವವಿದ್ಯಾನಿಲಯದ ಸಿಂಡಿಕೆಟ್ ಸೆನೆಟ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ‘ವಿಶೇಷ ಅಭಿನಂದನಾ ಕಾರ್ಯಕ್ರಮ ಮಾ.14ರಂದು ಸಿರಿಕೇಂದ್ರ ಕಛೇರಿಯಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರ ನಟ ಹಾಗೂ ಸಿರಿ ಬ್ರಾಂಡ್ ರಾಯಭಾರಿಯೂ ಆಗಿರುವ ರಮೇಶ್ ಅರವಿಂದ್ ರವರು ಸಿರಿ ಎಂಡಿ ಜನಾರ್ಧನರವರನ್ನು ಪ್ರೀತಿಪೂರ್ವಕವಾಗಿ ಅಭಿನಂದಿಸಿ, ಗೌರವಾರ್ಪಣೆ ಸಲ್ಲಿಸಿದರು, ನಂತರ ಅವರು ಮಾತನಾಡಿ ಪೂಜ್ಯರ ಆದರ್ಶ ತತ್ವವನ್ನು ಮೈಗೂಡಿಸಿಕೊಂಡಿರುವಂತಹ ಜನಾರ್ಧನರವರು ಸದಾ ಕ್ರಿಯಾಶೀಲರಾಗಿದ್ದು, ಯಾವುದೇ ವ್ಯಕ್ತಿ ಇವರಲ್ಲಿ ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಂತಹ ಸಂದರ್ಭದಲ್ಲಿ ಕಿಂಚಿತ್ತೂ ಹಿಂಜರಿಯದೇ ತಮ್ಮ ಸಹಾಯಹಸ್ತವನ್ನು ಚಾಚುವ ಮೂಲಕ ಔದಾರ್ಯವನ್ನು ಮೆರೆದಿದ್ದಾರೆ. ಇಂತಹ ಸಜ್ಜನಿಕೆ, ಸಹೃದಯವನ್ನು ಹೊಂದಿರುವ ವ್ಯಕ್ತಿ ಸಿರಿ ಸಂಸ್ಥೆಯ ಎಂಡಿಯಾಗಿರುವುದು ನಮ್ಮೆಲ್ಲರ ಸೌಭಾಗ್ಯ,ಸದಾ ಸಿರಿ ಸಂಸ್ಥೆಯ ಉನ್ನತಿಗಾಗಿ ಹಗಳಿರುಳು ಶ್ರಮಿಸುತ್ತಾ, ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವಂತಹ ಸಿರಿ ಎಂಡಿಯವರೊಂದಿಗೆ ನಾವು. ನಿವೇಲ್ಲರೂ ಕೈಜೋಡಿಸಿ ರಾಜ್ಯದಾದ್ಯಂತ ಪ್ರಸಿದ್ಧಿಗಳಿಸಿರುವ ನಮ್ಮ ಸಿರಿ ಬ್ರಾಂಡನ್ನು ಇಡೀ ಭಾರತ ದೇಶದಾದ್ಯಂತ ಸೂಪರ್ ಬ್ರಾಂಡ್ ಆಗಿ ಎತ್ತಿ ಹಿಡಿಯುವಲ್ಲಿ ನಾವೆಲ್ಲರೂ ಶಕ್ತಿ ಮೀರಿ ಪ್ರಯತ್ನಿಸೋಣ ಎಂದು ಎಲ್ಲಾ ಸಿರಿ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.

ಕೊಡಗು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ| ಅಶೋಕ್ ಅಲೂರು ಮತ್ತು ಡಾಕ್ಟರೇಟ್ ಪದವಿ ಪುರಸ್ಕೃತರಾದ ಡಾ| ರೂಪಾ ಅಶೋಕ್ ಅಲೂರು ದಂಪತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದು. ಸಿರಿ ಎಂಡಿ ಕೆ.ಎನ್ ಜನಾರ್ಧನರವರ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಅವರು ತಮ್ಮ ವೃತ್ತಿ ಜೀವನದಲ್ಲಿ ಸಾಧಿಸಿರುವಂತಹ ಅನೇಕ ಸಾಧನೆಗಳು ಹಾಗೂ ಪೂಜ್ಯರ ಮಾರ್ಗದರ್ಶನದಲ್ಲಿ ಅವರು ನಿರ್ವಹಿಸಿರುವಂತಹ ಸಮಾಜಮುಖಿ ಕೆಲಸಕಾರ್ಯಗಳ ಬಗ್ಗೆ ಪ್ರಸಂಶ ವ್ಯಕ್ತಪಡಿಸಿ, ಕೊಡಗು ವಿವಿ ಸೆನೆಟ್ ಸದಸ್ಯರಾಗಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಇವರಿಂದ ಇನ್ನಷ್ಟು ಜನಪರ ಕಾರ್ಯಗಳು ನೆರವೇರುವಂತಾಗಲಿ ಎಂದು ಹಾರೈಸಿ, ಗೌರವಾರ್ಪಣೆ ಸಲ್ಲಿಸಿದರು.

ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ. ಶ್ರೀ ಧ.ಮಂ.ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಜನಾರ್ಧನ ಮೋಗರಾಜ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಿರಿ ಎಂ.ಡಿಯವರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ .ಜನಾರ್ಧನರವರು ಮುಖ್ಯ ಅತಿಥಿ ಗಣ್ಯರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಬಾಲ್ಯದಿಂದ ಬಡತನದಲ್ಲಿಯೇ ತಾನು ಬೆಳೆದು ಬಂದ ದಿನಗಳನ್ನು ನೆನಪಿಸಿಕೊಂಡು, ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರ ಅಶೀರ್ವಾದ ಹಾಗೂ ಅವರ ಮಾರ್ಗದರ್ಶನದಲ್ಲಿ ಸಿರಿ ಎಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ ಜೊತೆಗೆ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿಯೂ ಸೇವೆಗೈಯ್ಯುವ ಸದಾವಕಾಶ ದೊರೆತಿರುವುದು ನನ್ನ ಸೌಭಾಗ್ಯ. ಸಿರಿ ಸಿಬ್ಬಂದಿಗಳೆಲ್ಲರೂ ಪ್ರಾಮಾಣಿಕತೆಯಿಂದ ಶ್ರಮವಹಿಸಿ ದುಡಿಯುವ ಮೂಲಕ ಸಂಸ್ಥೆಯು ಯಶಸ್ವಿಯಾಗಿ ನಡೆದು ಪೂಜ್ಯರ ಕನಸಾಗಿರುವ ಸಿರಿ ಸಂಸ್ಥೆಯನ್ನು ರಾಷ್ಟ್ರ ಮಟ್ಟದಲ್ಲಿ ಎತ್ತಿಹಿಡಿಯುವಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.

ಈ ಸಂದರ್ಭದಲ್ಲಿ ರಮೇಶ್ ಅರವಿಂದ್, ಕೊಡಗು ವಿವಿ ಉಪಕುಲಪತಿ ಅಶೋಕ್ ಅಲೂರು ಮತ್ತು ಡಾ| ರೂಪಾ ಆಲೂರು ದಂಪತಿಯನ್ನು ಸಿರಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನ ರವರು ಸ್ವಾಗತಿಸಿ. ಗೋದಾಮು ಪ್ರಬಂಧಕ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ. ಮುಖ್ಯ ಸಲಹೆ ಅಧಿಕಾರಿ ಗಣೇಶ್ ಪ್ರಸಾದ್ ಕಾಮತ್ ರವರು ಧನ್ಯವಾದವಿತ್ತರು.

Related posts

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!