25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
error: Content is protected !!