September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya
error: Content is protected !!