July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya
error: Content is protected !!