30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಹಾಗೂ ಪದ್ಮನಾಭ ಆಚಾರ್ಯರನ್ನು ಚಿನ್ನ ಪರಿಶೋಧಕನಾಗಿ ಮುಂದುವರಿಸುವಂತೆ ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್ ಮೂಲಕ ಮಂಗಳೂರು ಮುಖ್ಯ ಕಚೇರಿ ಜನರಲ್ ಮ್ಯಾನೇಜರ್ ಗೆ ಮನವಿ ಸಲ್ಲಿಸಲಾಯಿತು.

ಕೊಕ್ಕಡ ಗ್ರಾಮದ ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳೆದ19 ವರ್ಷಗಳಿಂದ ಪದ್ಮನಾಭ ಆಚಾರ್ಯರವರು ಚಿನ್ನ ಪರಿಶೋಧಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ದುರುದ್ದೇಶದಿಂದ ಇವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಟರ್ಮಿನೇಶನ್ ಪತ್ರದಲ್ಲಿ ನಕಲಿ ಚಿನ್ನ [SPURIOUS GOLD] ವನ್ನು ಬ್ಯಾಂಕಿನಲ್ಲಿ ಅಡಮಾನವಿಡಲು ಕಾರಣರಾಗಿದ್ದೀರಿ ಎಂಬ ಕಾರಣವನ್ನು ನೀಡಲಾಗಿದೆ. ಆದರೆ ಬ್ಯಾಂಕಿನ ಗೋಡೆಯಲ್ಲಿ ಅಂಟಿಸಲಾದ ಬರಹಗಳ ಪ್ರಕಾರ ವ್ಯವಸ್ಥಾಪಕರಿದ್ದು ನಿಯಮಗಳ ಪ್ರಕಾರ ಚಿನ್ನ ಪರಿಶೋಧಿಸಬೇಕು ಎಂಬ ಬರಹವನ್ನು ಬರೆಯಲಾಗಿದೆ ಮತ್ತು ಆಚಾರ್ಯರಿಗೆ ಇದುವರೆಗೆ ಚಿನ್ನವನ್ನು ವಿರೂಪಗೊಳಿಸಿ ಅಥವಾ ತುಂಡರಿಸಿ ಪರಿಶೀಲನೆ ನಡೆಸಬಹುದು ಎಂದು ನಿಯಮಗಳ ಮಾರ್ಗಸೂಚಿ ಪಟ್ಟಿಗಳನ್ನು ಕೊಟ್ಟಿರುವುದಿಲ್ಲ. ಸಾರ್ವಜನಿಕರಾದ ನಾವು ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮತ್ತು ಪದ್ಮನಾಭ ಆಚಾರ್ಯರನ್ನು ಸೇವೆಯಲ್ಲಿ ಮಂದುವರಿಸಬೇಕೆಂದು ಬ್ಯಾಂಕಿನ ಕೇಂದ್ರ ಕಛೇರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಮ್ ಭಟ್, ಸುಬ್ರಹಣ್ಯ ಶಬರಾಯ, ಪದ್ಮನಾಭ ಆಚಾರ್ಯ, ಶ್ರೀಧರ ಕೆಂಗುಡೇಲು, ದಯಾನೀಶ್, ತುಕ್ರಪ್ಪ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!