July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!