25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಅವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಕ್ಕೆ ಭಾಜನರಾಗಿದ್ದಾರೆ.

ಮಾರ್ಚ್ 17ರ(ಇಂದು) ಭಾನುವಾರ ರಾತ್ರಿ 9 ಗಂಟೆಗೆ ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಳೆದ ಹಲವಾರು ಸಮಯಗಳಿಂದ ಸಮಾಜ ಸೇವೆ ಹಾಗೂ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನ‌ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್,ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!