27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!