22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya
error: Content is protected !!