25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!