July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. 17 ರoದು ಲೋಕಾರ್ಪಣೆಗೊಂಡಿತು.

ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮದರ್ಶಿಗಳಾದ ಆನಂದ ಗೌಡ, ಮೈರೋಳ್ತಡ್ಕ ಶಿವಶಕ್ತಿ ಜನರಲ್ ಸ್ಟೋರ್ ಮಾಲಕರಾದ ಗುರುಪ್ರಸಾದ್ ಕುರಾಯ, ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಅಧ್ಯಕ್ಷರಾದ ಅಶ್ವಥ್ ಗೌಡ, ಕಾರ್ಯದರ್ಶಿ ಉದಯ ಮಿತ್ಯೋಡಿ, ಊರಿನ ಹಿರಿಯರು, ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಫಲ ಗಿಡ ವಿತರಣೆ ಮಾಡಲಾಯಿತು ಹಾಗೂ ನೂತನ ಬಸ್ ನಿಲ್ದಾಣದ ಬಳಿ ಗಿಡ ನೆಡುವ ಮೂಲಕ ಹಾಗೂ ಬಸ್ ನಿಲ್ದಾಣ ಸುತ್ತ ಪರಿಸರ ಸoರಕ್ಷಣೆಯ ಸಂದೇಶ ಸಾರುವ ಚಿತ್ರಣ ಅಳವಡಿಸಲಾಗಿದೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya
error: Content is protected !!