29.6 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಹಾಗೂ ಪದ್ಮನಾಭ ಆಚಾರ್ಯರನ್ನು ಚಿನ್ನ ಪರಿಶೋಧಕನಾಗಿ ಮುಂದುವರಿಸುವಂತೆ ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್ ಮೂಲಕ ಮಂಗಳೂರು ಮುಖ್ಯ ಕಚೇರಿ ಜನರಲ್ ಮ್ಯಾನೇಜರ್ ಗೆ ಮನವಿ ಸಲ್ಲಿಸಲಾಯಿತು.

ಕೊಕ್ಕಡ ಗ್ರಾಮದ ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳೆದ19 ವರ್ಷಗಳಿಂದ ಪದ್ಮನಾಭ ಆಚಾರ್ಯರವರು ಚಿನ್ನ ಪರಿಶೋಧಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ದುರುದ್ದೇಶದಿಂದ ಇವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಟರ್ಮಿನೇಶನ್ ಪತ್ರದಲ್ಲಿ ನಕಲಿ ಚಿನ್ನ [SPURIOUS GOLD] ವನ್ನು ಬ್ಯಾಂಕಿನಲ್ಲಿ ಅಡಮಾನವಿಡಲು ಕಾರಣರಾಗಿದ್ದೀರಿ ಎಂಬ ಕಾರಣವನ್ನು ನೀಡಲಾಗಿದೆ. ಆದರೆ ಬ್ಯಾಂಕಿನ ಗೋಡೆಯಲ್ಲಿ ಅಂಟಿಸಲಾದ ಬರಹಗಳ ಪ್ರಕಾರ ವ್ಯವಸ್ಥಾಪಕರಿದ್ದು ನಿಯಮಗಳ ಪ್ರಕಾರ ಚಿನ್ನ ಪರಿಶೋಧಿಸಬೇಕು ಎಂಬ ಬರಹವನ್ನು ಬರೆಯಲಾಗಿದೆ ಮತ್ತು ಆಚಾರ್ಯರಿಗೆ ಇದುವರೆಗೆ ಚಿನ್ನವನ್ನು ವಿರೂಪಗೊಳಿಸಿ ಅಥವಾ ತುಂಡರಿಸಿ ಪರಿಶೀಲನೆ ನಡೆಸಬಹುದು ಎಂದು ನಿಯಮಗಳ ಮಾರ್ಗಸೂಚಿ ಪಟ್ಟಿಗಳನ್ನು ಕೊಟ್ಟಿರುವುದಿಲ್ಲ. ಸಾರ್ವಜನಿಕರಾದ ನಾವು ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮತ್ತು ಪದ್ಮನಾಭ ಆಚಾರ್ಯರನ್ನು ಸೇವೆಯಲ್ಲಿ ಮಂದುವರಿಸಬೇಕೆಂದು ಬ್ಯಾಂಕಿನ ಕೇಂದ್ರ ಕಛೇರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಮ್ ಭಟ್, ಸುಬ್ರಹಣ್ಯ ಶಬರಾಯ, ಪದ್ಮನಾಭ ಆಚಾರ್ಯ, ಶ್ರೀಧರ ಕೆಂಗುಡೇಲು, ದಯಾನೀಶ್, ತುಕ್ರಪ್ಪ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.

Related posts

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya
error: Content is protected !!