July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಹಾಗೂ ಪದ್ಮನಾಭ ಆಚಾರ್ಯರನ್ನು ಚಿನ್ನ ಪರಿಶೋಧಕನಾಗಿ ಮುಂದುವರಿಸುವಂತೆ ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್ ಮೂಲಕ ಮಂಗಳೂರು ಮುಖ್ಯ ಕಚೇರಿ ಜನರಲ್ ಮ್ಯಾನೇಜರ್ ಗೆ ಮನವಿ ಸಲ್ಲಿಸಲಾಯಿತು.

ಕೊಕ್ಕಡ ಗ್ರಾಮದ ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳೆದ19 ವರ್ಷಗಳಿಂದ ಪದ್ಮನಾಭ ಆಚಾರ್ಯರವರು ಚಿನ್ನ ಪರಿಶೋಧಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ದುರುದ್ದೇಶದಿಂದ ಇವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಟರ್ಮಿನೇಶನ್ ಪತ್ರದಲ್ಲಿ ನಕಲಿ ಚಿನ್ನ [SPURIOUS GOLD] ವನ್ನು ಬ್ಯಾಂಕಿನಲ್ಲಿ ಅಡಮಾನವಿಡಲು ಕಾರಣರಾಗಿದ್ದೀರಿ ಎಂಬ ಕಾರಣವನ್ನು ನೀಡಲಾಗಿದೆ. ಆದರೆ ಬ್ಯಾಂಕಿನ ಗೋಡೆಯಲ್ಲಿ ಅಂಟಿಸಲಾದ ಬರಹಗಳ ಪ್ರಕಾರ ವ್ಯವಸ್ಥಾಪಕರಿದ್ದು ನಿಯಮಗಳ ಪ್ರಕಾರ ಚಿನ್ನ ಪರಿಶೋಧಿಸಬೇಕು ಎಂಬ ಬರಹವನ್ನು ಬರೆಯಲಾಗಿದೆ ಮತ್ತು ಆಚಾರ್ಯರಿಗೆ ಇದುವರೆಗೆ ಚಿನ್ನವನ್ನು ವಿರೂಪಗೊಳಿಸಿ ಅಥವಾ ತುಂಡರಿಸಿ ಪರಿಶೀಲನೆ ನಡೆಸಬಹುದು ಎಂದು ನಿಯಮಗಳ ಮಾರ್ಗಸೂಚಿ ಪಟ್ಟಿಗಳನ್ನು ಕೊಟ್ಟಿರುವುದಿಲ್ಲ. ಸಾರ್ವಜನಿಕರಾದ ನಾವು ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮತ್ತು ಪದ್ಮನಾಭ ಆಚಾರ್ಯರನ್ನು ಸೇವೆಯಲ್ಲಿ ಮಂದುವರಿಸಬೇಕೆಂದು ಬ್ಯಾಂಕಿನ ಕೇಂದ್ರ ಕಛೇರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಮ್ ಭಟ್, ಸುಬ್ರಹಣ್ಯ ಶಬರಾಯ, ಪದ್ಮನಾಭ ಆಚಾರ್ಯ, ಶ್ರೀಧರ ಕೆಂಗುಡೇಲು, ದಯಾನೀಶ್, ತುಕ್ರಪ್ಪ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.

Related posts

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya
error: Content is protected !!