23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಹಾಗೂ ಪದ್ಮನಾಭ ಆಚಾರ್ಯರನ್ನು ಚಿನ್ನ ಪರಿಶೋಧಕನಾಗಿ ಮುಂದುವರಿಸುವಂತೆ ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್ ಮೂಲಕ ಮಂಗಳೂರು ಮುಖ್ಯ ಕಚೇರಿ ಜನರಲ್ ಮ್ಯಾನೇಜರ್ ಗೆ ಮನವಿ ಸಲ್ಲಿಸಲಾಯಿತು.

ಕೊಕ್ಕಡ ಗ್ರಾಮದ ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳೆದ19 ವರ್ಷಗಳಿಂದ ಪದ್ಮನಾಭ ಆಚಾರ್ಯರವರು ಚಿನ್ನ ಪರಿಶೋಧಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ದುರುದ್ದೇಶದಿಂದ ಇವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಆದರೆ ಟರ್ಮಿನೇಶನ್ ಪತ್ರದಲ್ಲಿ ನಕಲಿ ಚಿನ್ನ [SPURIOUS GOLD] ವನ್ನು ಬ್ಯಾಂಕಿನಲ್ಲಿ ಅಡಮಾನವಿಡಲು ಕಾರಣರಾಗಿದ್ದೀರಿ ಎಂಬ ಕಾರಣವನ್ನು ನೀಡಲಾಗಿದೆ. ಆದರೆ ಬ್ಯಾಂಕಿನ ಗೋಡೆಯಲ್ಲಿ ಅಂಟಿಸಲಾದ ಬರಹಗಳ ಪ್ರಕಾರ ವ್ಯವಸ್ಥಾಪಕರಿದ್ದು ನಿಯಮಗಳ ಪ್ರಕಾರ ಚಿನ್ನ ಪರಿಶೋಧಿಸಬೇಕು ಎಂಬ ಬರಹವನ್ನು ಬರೆಯಲಾಗಿದೆ ಮತ್ತು ಆಚಾರ್ಯರಿಗೆ ಇದುವರೆಗೆ ಚಿನ್ನವನ್ನು ವಿರೂಪಗೊಳಿಸಿ ಅಥವಾ ತುಂಡರಿಸಿ ಪರಿಶೀಲನೆ ನಡೆಸಬಹುದು ಎಂದು ನಿಯಮಗಳ ಮಾರ್ಗಸೂಚಿ ಪಟ್ಟಿಗಳನ್ನು ಕೊಟ್ಟಿರುವುದಿಲ್ಲ. ಸಾರ್ವಜನಿಕರಾದ ನಾವು ಈ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮತ್ತು ಪದ್ಮನಾಭ ಆಚಾರ್ಯರನ್ನು ಸೇವೆಯಲ್ಲಿ ಮಂದುವರಿಸಬೇಕೆಂದು ಬ್ಯಾಂಕಿನ ಕೇಂದ್ರ ಕಛೇರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಮ್ ಭಟ್, ಸುಬ್ರಹಣ್ಯ ಶಬರಾಯ, ಪದ್ಮನಾಭ ಆಚಾರ್ಯ, ಶ್ರೀಧರ ಕೆಂಗುಡೇಲು, ದಯಾನೀಶ್, ತುಕ್ರಪ್ಪ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya
error: Content is protected !!