25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ
“ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಜನ ಸೇವೆಯೇ ಜನಾರ್ಧನ ಸೇವೆ ಎಂಬುದನ್ನು ಅರಿತು ಜನರ ಕಷ್ಟಗಳಿಗೆ, ಊರಿನ‌ ಬೆಳವಣಿಗೆಗೆ ಸದಾ ಸ್ಪಂದಿಸುತ್ತ, ಊರಿನ ಜನರ ಅಪಾರ ಪ್ರೀತಿಗೆ ಪಾತ್ರರಾಗಿರುವ ಸರ್ವೋದಯ ಪ್ರೆಂಡ್ಸ್ ಅಟ್ಲಾಜೆಯ ಮಾಜಿ ಅಧ್ಯಕ್ಷರು, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪ್ರಸ್ತುತ ಗ್ರಾಮ ಪಂಚಾಯತ್ ಬಳಂಜದ ಉಪಾಧ್ಯಕ್ಷರಾಗಿರುವ ಯಶೋಧರ ಶೆಟ್ಟಿಯವರನ್ನು ಜೆಸಿಐ ಭವನದಲ್ಲಿ ಗೌರವಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾಗಿರುವ ಪ್ರೀತಮ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ ನ ಮಾಲಕ ಮೋಹನ್ ಸುವರ್ಣ, ವಲಯ 15 ರ ಉಪಾಧ್ಯಕ್ಷ ಶಂಕರ್ ರಾವ್ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ಮಹಿಳಾ ಘಟಕದ ಸಂಯೋಜಕಿ ಶೃತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವತ್ ಕುಮಾರ್ ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ಕಾರ್ಯಕ್ರಮದ ಸಂಯೋಜಕಿ ರಕ್ಷಿತಾ ಶೆಟ್ಟಿ ವಾಚಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.
ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಮಾಡಿದರು. ಜೆಸಿ ವಾಣಿಯನ್ನು ಶಿವಾನಿ ಉದ್ಘೋಷಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಪೂರ್ವಧ್ಯಕ್ಷರುಗಳಾದ ತುಕಾರಾಮ್, ನಾರಾಯಣ ಶೆಟ್ಟಿ, ಚಿದಾನಂದ ಇಡ್ಯ, ಸಂತೋಷ್ ಪಿ ಕೋಟ್ಯಾನ್, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರಾದ ಶೈಲೇಶ್, ಸದಸ್ಯರಾದ ಜಿತೇಶ್, ರತ್ನಾಕರ ಹಾಗೂ ಜೆಜೆಸಿ ಸದಸ್ಯರು ಭಾಗವಹಿಸಿದರು.

Related posts

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!