25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya
error: Content is protected !!