30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಮಾ.19ರವರೆಗೆ ನಡೆಯಿತು.

ಮಾ.17 ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.

ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿ ಗುತ್ತಿಗೆ ಭಂಡಾರ ಹಿಂದಿರುಗುವುದು., ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya
error: Content is protected !!