April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya
error: Content is protected !!