September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya
error: Content is protected !!