23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ ಮಾ.18 ರಂದು ಸಂಜೆ ನಡೆಯಿತು.

ವಿಷಯ ತಿಳಿದು ತಕ್ಷಣ ಸ್ಥಳೀಯ ಯುವಕರಾದ ಹಮೀದ್ ಜಿ.ಡಿ,ಪ್ರಕಾಶ್ ಪೂಜಾರಿ ಮೆರ್ಲ,ಸೈಪುಲ್ಲ ಹೆಚ್,ಎಸ್,ಮತ್ತು ಸ್ಥಳೀಯರ ಮುತುವರ್ಜಿಯಿಂದ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದರು. ತಕ್ಷಣ ಸ್ಥಳೀಯರು ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅದೇ ಸಮಯದಲ್ಲಿ ತಾಲ್ಲೂಕಿನ ಬೇರೆ ಕಡೆಯಲ್ಲಿ ಬೆಂಕಿ ನಂದಿಸುನ ಕೆಲಸದಲ್ಲಿ ನಿರತರಾಗಿರುವುದರಿಂದ ಗೇರುಕಟ್ಟೆಗೆ ಬರಲು ಸಾಧ್ಯವಾಗಿಲ್ಲವೆಂದು ತಿಳಿದು ಬಂದಿದೆ. ಖಾಸಗಿ ಕಂಪನಿ ಮೊಬೈಲ್ ಟವರ್ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ ಪಾರ್ಮ್‌ನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಜ್ವಾಲೆ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮೊಬೈಲ್ ಟವರ್‌ನ ಕೆಳಭಾಗ ಸಂಪೂರ್ಣವಾಗಿ ಬೆಂಕಿಗಾಹುತಿಯಿದೆ.

Related posts

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya
error: Content is protected !!