July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ
“ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಜನ ಸೇವೆಯೇ ಜನಾರ್ಧನ ಸೇವೆ ಎಂಬುದನ್ನು ಅರಿತು ಜನರ ಕಷ್ಟಗಳಿಗೆ, ಊರಿನ‌ ಬೆಳವಣಿಗೆಗೆ ಸದಾ ಸ್ಪಂದಿಸುತ್ತ, ಊರಿನ ಜನರ ಅಪಾರ ಪ್ರೀತಿಗೆ ಪಾತ್ರರಾಗಿರುವ ಸರ್ವೋದಯ ಪ್ರೆಂಡ್ಸ್ ಅಟ್ಲಾಜೆಯ ಮಾಜಿ ಅಧ್ಯಕ್ಷರು, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪ್ರಸ್ತುತ ಗ್ರಾಮ ಪಂಚಾಯತ್ ಬಳಂಜದ ಉಪಾಧ್ಯಕ್ಷರಾಗಿರುವ ಯಶೋಧರ ಶೆಟ್ಟಿಯವರನ್ನು ಜೆಸಿಐ ಭವನದಲ್ಲಿ ಗೌರವಿಸಲಾಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾಗಿರುವ ಪ್ರೀತಮ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ ನ ಮಾಲಕ ಮೋಹನ್ ಸುವರ್ಣ, ವಲಯ 15 ರ ಉಪಾಧ್ಯಕ್ಷ ಶಂಕರ್ ರಾವ್ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ಮಹಿಳಾ ಘಟಕದ ಸಂಯೋಜಕಿ ಶೃತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವತ್ ಕುಮಾರ್ ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ಕಾರ್ಯಕ್ರಮದ ಸಂಯೋಜಕಿ ರಕ್ಷಿತಾ ಶೆಟ್ಟಿ ವಾಚಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು.
ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಮಾಡಿದರು. ಜೆಸಿ ವಾಣಿಯನ್ನು ಶಿವಾನಿ ಉದ್ಘೋಷಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಪೂರ್ವಧ್ಯಕ್ಷರುಗಳಾದ ತುಕಾರಾಮ್, ನಾರಾಯಣ ಶೆಟ್ಟಿ, ಚಿದಾನಂದ ಇಡ್ಯ, ಸಂತೋಷ್ ಪಿ ಕೋಟ್ಯಾನ್, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರಾದ ಶೈಲೇಶ್, ಸದಸ್ಯರಾದ ಜಿತೇಶ್, ರತ್ನಾಕರ ಹಾಗೂ ಜೆಜೆಸಿ ಸದಸ್ಯರು ಭಾಗವಹಿಸಿದರು.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya
error: Content is protected !!