25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಅವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಕ್ಕೆ ಭಾಜನರಾಗಿದ್ದಾರೆ.

ಮಾರ್ಚ್ 17ರ(ಇಂದು) ಭಾನುವಾರ ರಾತ್ರಿ 9 ಗಂಟೆಗೆ ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಳೆದ ಹಲವಾರು ಸಮಯಗಳಿಂದ ಸಮಾಜ ಸೇವೆ ಹಾಗೂ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನ‌ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್,ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya
error: Content is protected !!