25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಅವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಕ್ಕೆ ಭಾಜನರಾಗಿದ್ದಾರೆ.

ಮಾರ್ಚ್ 17ರ(ಇಂದು) ಭಾನುವಾರ ರಾತ್ರಿ 9 ಗಂಟೆಗೆ ಕ್ಕೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಳೆದ ಹಲವಾರು ಸಮಯಗಳಿಂದ ಸಮಾಜ ಸೇವೆ ಹಾಗೂ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಗಾಗಲೇ 5 ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನ‌ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್,ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!